ನಾಪೆÇೀಕ್ಲು, ಮಾ. 1: ಕಾಂತೂರು – ಮೂರ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಪ್ಪುಗುಂಡಿ ಬಳಿ ಶ್ರೀ ಲವಣೇಶ್ವರ ದೇವರ ಗುಡಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆÇಲೀಸರು ಬಿರುಸಿನ ತನಿಖೆ ಕೈಗೊಂಡಿದ್ದಾರೆ.

ತನಿಖೆ ನಡೆಸುವಂತೆ ಅಲ್ಲಿನ ಶ್ರೀ ಮಹಾದೇವರ ದೇವಳ ಸಮಿತಿ ಅಧ್ಯಕ್ಷ ಕೆ.ಎಂ. ತಮ್ಮಯ್ಯ ನಾಪೆÇೀಕ್ಲು ಪೆÇಲೀಸ್ ಠಾಣೆಗೆ ನೀಡಿದ ದೂರಿನ ಅನ್ವಯ ಅನುಮಾನಾಸ್ಪದ ವ್ಯಕ್ತಿಗಳನ್ನು ಮತ್ತು ಗ್ರಾಮಸ್ಥರನ್ನು ವಿಚಾರಣೆ ನಡೆಸಿರುವದಾಗಿ ತಿಳಿಸಿರುವ ನಾಪೆÇೀಕ್ಲು ಪೆÇಲೀಸ್ ಠಾಣಾಧಿಕಾರಿ ನಂಜುಂಡ ಸ್ವಾಮಿ, ಇಲ್ಲಿಯವರೆಗೆ ಇದಕ್ಕೆ ಸಂಬಂಧಿಸಿದಂತೆ ಯಾವದೇ ಮಾಹಿತಿ ಲಭ್ಯವಾಗಿಲ್ಲ. ತನಿಖೆ ಪ್ರಗತಿಯಲ್ಲಿದೆ ಎಂದು ‘ಶಕ್ತಿ’ಗೆ ತಿಳಿಸಿದ್ದಾರೆ.