ಕೂಡಿಗೆ, ಮಾ. 1: ಶಿರಂಗಾಲ ಗ್ರಾಮ ದೇವತಾ ಸಮಿತಿಯ ವತಿಯಿಂದ ತಾ. 5 ರಂದು ಶ್ರೀ ಉಮಾಮಹೇಶ್ವರ ರಥೋತ್ಸವ ಜರುಗಲಿದ್ದು, ರಥೋತ್ಸವ ಅಂಗವಾಗಿ ಶ್ರೀ ಉಮಾಮಹೇಶ್ವರ ಸ್ವಾಮಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆಗಳು ನಡೆಯಲಿವೆ.

ದೇವಾಲಯ ಸಮಿತಿ ವತಿಯಿಂದ ಮಂಗಳವಾದ್ಯ ಮತ್ತು ವೀರಗಾಸೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಕಂಸಾಳೆ, ಡೊಳ್ಳು ಕುಣಿತಗಳ ಮೆರವಣಿಗೆಯೊಂದಿಗೆ ಶ್ರೀ ಉಮಾಮಹೇಶ್ವರ ರಥೋತ್ಸವ ನಡೆಯಲಿದೆ.

ರಥೋತ್ಸವದ ಅಂಗವಾಗಿ ಸಂಜೆ 8 ಗಂಟೆಗೆ ಶಿರಂಗಾಲ ಸಂತೆ ಮೈದಾನದಲ್ಲಿ ಶ್ರೀ ಮಂಟಿಗಮ್ಮ ಮತ್ತು ಶ್ರೀ ಉಮಾಮಹೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ವತಿಯಿಂದ ಕುರುಕ್ಷೇತ್ರ ಅಥವಾ ಧರ್ಮರಾಜ್ಯ ಸ್ಥಾಪನೆ ನಾಟಕವನ್ನು ಏರ್ಪಡಿಸಲಾಗಿದೆ. ತಾ. 6 ರಂದು ಶ್ರೀ ಉಮಾ ಮಹೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಪ್ರಸಾದ ವಿನಿಯೋಗ ಮತ್ತು ತಾ. 7 ರಂದು ಪವಿತ್ರ ಕಾವೇರಿ ನದಿಯಲ್ಲಿ ಶ್ರೀ ಉಮಾಮಹೇಶ್ವರ ಸ್ವಾಮಿ ತೆಪ್ಪೋತ್ಸವ ಜರುಗಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ತಿಳಿಸಿದ್ದಾರೆ.