ಮಡಿಕೇರಿ, ಮಾ. 1: ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಿಸುವ ಸಭೆ ತಾ. 2 ರಂದು (ಇಂದು) ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಇಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವದು ಎಂದು ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಸಭೆಗೆ ಹಾಜರಾಗುವಂತೆ ಅವರು ಕೋರಿದ್ದಾರೆ.