ಕುಶಾಲನಗರ, ಮಾ.1 : ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಭೂಮಿಪೂಜೆ ನೆರವೇರಿಸಿದರು.

ಕುಶಾಲನಗರ ಪಟ್ಟಣದ ಅಯ್ಯಪ್ಪಸ್ವಾಮಿ ರಸ್ತೆ ಬಳಿ ರೂ. 3 ಕೋಟಿ ವೆಚ್ಚದಲ್ಲಿ ಬಿಸಿಎಂ ವಿದ್ಯಾರ್ಥಿ ನಿಯರ ನಿಲಯ, ಮುಳ್ಳುಸೋಗೆ ಗ್ರಾಮದ ಬಳಿಯ ಓಂಕಾರ್ ಬಡಾವಣೆಯಲ್ಲಿ ರಸ್ತೆ ಕಾಮಗಾರಿ, ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ಅಡುಗೆ ಮನೆ ಕಟ್ಟಡ ಹಾಗೂ ಮಾದಾಪಟ್ಟಣ, ಮದಲಾಪುರ ಗ್ರಾಮಗಳ ವ್ಯಾಪ್ತಿಯಲ್ಲಿ ರಸ್ತೆ ಚರಂಡಿ ಮತ್ತಿತರ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಒಟ್ಟು 7 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಅಪ್ಪಚ್ಚುರಂಜನ್ ಮಾಹಿತಿ ಒದಗಿಸಿದರು. ಈ ಸಂದರ್ಭ ಸ್ಥಳೀಯ ಜನಪ್ರತಿನಿಧಿಗಳು, ಇಲಾಖಾ ಅಧಿಕಾರಿಗಳು ಇದ್ದರು.