ಮಡಿಕೇರಿ, ಮಾ.20 : ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಪ್ರಚಾರಕ್ಕೆ ಬಳಸುವ ಸಾಮಗ್ರಿಗಳಿಗೆ ಮಾರುಕಟ್ಟೆ ದರ ನಿಗದಿಪಡಿಸುವ ಸಭೆಯು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬ್ಯಾನರ್, ಬಂಟಿಂಗ್ಸ್, ಪೊಸ್ಟರ್ ಮತ್ತಿತರ ಬಗ್ಗೆ ದರ ನಿಗದಿಪಡಿಸ ಲಾಗಿದ್ದು, ಆಕ್ಷೇಪಗಳಿದ್ದಲ್ಲಿ ಮಾಹಿತಿ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಪೊಸ್ಟರ್ ಮತ್ತು ಬ್ಯಾನರ್ ಅಳವಡಿಸ ಬಾರದು, ಅಳವಡಿಸಬೇಕಿದ್ದಲ್ಲಿ ಅನುಮತಿ ಪಡೆಯಬೇಕು. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಮುದ್ರಣ ಮಾಡುವ ಮೊದಲು ಜಿಲ್ಲಾಧಿಕಾರಿಯವರ ಅನುಮತಿ ಪಡೆಯಬೇಕು. ಎಷ್ಟು ಪ್ರತಿ ಮುದ್ರಣ ಮಾಡಲಾಗುತ್ತಿದೆ ಮತ್ತು ವೆಚ್ಚದ ಬಗ್ಗೆ ವಿವರ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಈ ಬಾರಿ ವಿವಿಪ್ಯಾಟ್ ಇರುವದರಿಂದ ಒಂದು ಮತಗಟ್ಟೆಯಲ್ಲಿ 1250 ಕ್ಕಿಂತ ಹೆಚ್ಚು ಮತದಾರರು ಇದ್ದಲ್ಲಿ ಹೆಚ್ಚುವರಿ ಮತಗಟ್ಟೆಯನ್ನು ಸ್ಥಾಪಿಸ ಲಾಗುವದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಮುದ್ರಣ ಮಾಲೀಕರು ಮತ್ತು ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಮತ್ತೊಂದು ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಚುನಾವಣೆಗೆ ಸಂಬಂಧಿಸಿದ ಬ್ಯಾನರ್, ಪೊಸ್ಟರ್ಗಳನ್ನು ಎಲ್ಲೆಂದರಲ್ಲಿ ಅಳವಡಿಸುವಂತಿಲ್ಲ ಎಂದು ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಅವರು ಮತದಾರರ ಗುರುತಿನ ಚೀಟಿ ಸಂಬಂಧ ಪರಿಶೀಲಿಸಿಕೊಳ್ಳುವಂತೆ ಅವರು ಸಲಹೆ ಮಾಡಿದರು.
ರಾಜಕೀಯ ಪಕ್ಷಗಳ ಪ್ರತಿನಿಧಿ ಗಳಾದ ಸಜಿಲ್ ಕೃಷ್ಣ(ಬಿಜೆಪಿ), ತನ್ನಿರಾ ಮೈನಾ(ಕಾಂಗ್ರೆಸ್) ಅವರು ಹಲವು ಮಾಹಿತಿ ನೀಡಿದರು.