ಮಡಿಕೇರಿ, ಮಾ. 20: ನಾಪೋಕ್ಲು ಗ್ರಾಮದಲ್ಲಿ ವಾಸವಿರುವ ಕೇಲೇಟಿರ ದೇವಯ್ಯ ತನ್ನ ಸ್ವಂತ ಜಾಗದಲ್ಲಿ ಕಟ್ಟಡ ನಿರ್ಮಿಸಲು ಜಿಲ್ಲಾಧಿಕಾರಿ ಹಾಗೂ ನಾಪೋಕ್ಲು ಪಂಚಾಯಿತಿಗೆ ಅರ್ಜಿ ಸಲ್ಲಿಸಿ ಕಾನೂನು ರೀತಿಯಲ್ಲೇ ಅನುಮತಿ ಪಡೆದಿದ್ದು, ಕಟ್ಟಡ ನಿರ್ಮಿಸಲು ಮುಂದಾದಾಗ ಹಾಲಿ ಪಂಚಾಯಿತಿ ಅಧ್ಯಕ್ಷ ಹಾಗೂ ಸದಸ್ಯ ಕುರೇಶಿ ಎಂಬವರು ತಮ್ಮ ವೈಯಕ್ತಿಕ ಲಾಭದ ಉದ್ದೇಶಕ್ಕಾಗಿ ಅಡ್ಡಿಪಡಿಸಿರುವದನ್ನು ಕೊಡವ ಮಕ್ಕಡ ಕೂಟ ತೀವ್ರವಾಗಿ ಖಂಡಿಸುತ್ತದೆ.

ಇಂತಹ ಜನಪ್ರತಿನಿಧಿಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.