ಗೋಣಿಕೊಪ್ಪಲು. ಮಾ. 20. ದಕ್ಷಿಣ ಕೊಡಗಿನ ವಿವಿಧ ಭಾಗಗಳಲ್ಲಿ ಜಾತ್ಯಾತೀತ ಜನತಾದಳದ ಜಿಲ್ಲಾಧ್ಯಕ್ಷ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಂಕೇತ್ ಪೂವಯ್ಯ ಚುನಾವಣಾ ಪ್ರಚಾರ ನಡೆಸಿದರು.ವಿವಿಧೆಡೆ ಹುಲಿ ಹಾವಳಿಯಿಂದ ಹಸು ಕಳೆದುಕೊಂಡ ಕುಟುಂಬವನ್ನು ಭೇಟಿ ಮಾಡಿದರು.ಅರಣ್ಯ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾದಾನ ವ್ಯಕ್ತಪಡಿಸಿದರು.

ಶ್ರೀಮಂಗಲ ಪಂಚಾಯಿತಿ ವ್ಯಾಪ್ತಿಯ ಕುರ್ಚಿ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಲಿ ಸದಸ್ಯರಾಗಿರುವ ಅಜ್ಜಮಾಡ ಮುತ್ತಮ್ಮ ಅವರನ್ನು ಕೊಡಗು ಜಿಲ್ಲಾ ಜೆಡಿಎಸ್‍ನ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಸಂಕೇತ್ ಪೂವಯ್ಯ ನೇಮಕ ಮಾಡಿದರು.