ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆದಂ

ಮಡಿಕೇರಿ, ಮಾ. 21: ಜಿಲ್ಲಾ ಕಾಂಗ್ರೆಸ್‍ನ ಉಪಾಧ್ಯಕ್ಷರಾಗಿ ಸೋಮವಾರಪೇಟೆಯ ಕೆ.ಎ. ಆದಂ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಆದೇಶದಂತೆ ಜಿಲ್ಲಾಧ್ಯಕ್ಷ ಶಿವು ಮಾದಪ್ಪ ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಉಸ್ತುವಾರಿ ಸಚಿವ ಸೀತಾರಾಂ ಅವರ ಸಮ್ಮುಖದಲ್ಲಿ ನೇಮಕಾತಿ ಆದೇಶ ನೀಡಿದರು.

ಆದಂ ಅವರು ಸೋಮವಾರಪೇಟೆ ಪ.ಪಂ. ಸದಸ್ಯರಾಗಿ, ಕಸಾಪ ತಾಲೂಕು ಘಟಕದ ಗೌರವ ಕಾರ್ಯದರ್ಶಿಯಾಗಿ, ಜಲಾಲಿಯ ಮಸೀದಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.