ಸೋಮವಾರಪೇಟೆ, ಮಾ. 23: ಕರ್ನಾಟಕ ಕಾರ್ಮಿಕ ಹೋರಾಟ ಸಂಘವನ್ನು ಜಿಲ್ಲೆಯಲ್ಲಿ ಅಸ್ತಿತ್ವಕ್ಕೆ ತರಲಾಗಿದ್ದು, ಕೊಡಗು ಜಿಲ್ಲಾಧ್ಯಕ್ಷರನ್ನಾಗಿ ಸೋಮವಾರಪೇಟೆಯ ಹೆಚ್.ಆರ್. ಉಮೇಶ್ ಅವರನ್ನು ನೇಮಕ ಮಾಡಲಾಗಿದೆ.

ಕಾರ್ಮಿಕರ ಸಮಸ್ಯೆಗಳ ವಿರುದ್ಧ ನಿರಂತರ ಹೋರಾಟ, ಸರ್ಕಾರಿ ಸೌಲಭ್ಯಗಳ ಮಾಹಿತಿ ಒದಗಿಸಲು ಸಂಘ ಕಾರ್ಯೋನ್ಮುಖವಾಗಲಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾ ಸಮಿತಿ ಹಾಗೂ ಮೂರು ತಾಲೂಕುಗಳ ಸಮಿತಿಯನ್ನು ರಚಿಸಲಾಗುವದು ಎಂದು ಸಂಘದ ರಾಜ್ಯಾಧ್ಯಕ್ಷ ರಾಜೇಂದ್ರಕುಮಾರ್ ತಿಳಿಸಿದ್ದಾರೆ.

ಇಲ್ಲಿನ ಪತ್ರಿಕಾಭವನದಲ್ಲಿ ನಡೆದ ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷರ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ಜಿ. ಪ್ರದೀಪ್ ಶೆಟ್ಟಿ, ಕಾರ್ಯದರ್ಶಿ ಆರ್. ದೊರೈರಾಜ್ ಸೇರಿದಂತೆ ಸದಸ್ಯರುಗಳು ಭಾಗವಹಿಸಿದ್ದರು.