ಚೆಟ್ಟಳ್ಳಿ: ಕಳೆದ ಐದು ವರ್ಷದಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತದಲ್ಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯಕ್ಕೆ ಹಾಗೂ ನಮ್ಮ ಜಿಲ್ಲೆಗೆ ಹಲವಷ್ಟು ಅಭಿವೃದ್ಧಿ ಕಾಮಗಾರಿಯನ್ನು ಕೈಗೊಂಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಪಪ್ಪು ತಿಮ್ಮಯ್ಯ ಹೇಳಿದ್ದಾರೆ.

ಜಿಲ್ಲೆಯ ಗ್ರಾಮೀಣ ರಸ್ತೆಯ ಡಾಮರೀಕರಣ, ಕಾಂಕ್ರೀಟೀಕರಣ, ಕುಡಿಯುವ ನೀರಿನ ಯೋಜನೆ ,ಮುಂತಾದ ಹಲವಷ್ಟು ಮೂಲಬೂತವಾದ ಸೌಕರ್ಯಗಳನ್ನು ಒದಗಿಸಿಕೊಡುವಲ್ಲಿ ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ನಾಯಕರು ಅವರ ಜೊತೆಗೂಡಿ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಿರಂತರ ವಿದ್ಯುತ್ ಸರಬರಾಜು, ರೈತ ಸಾಲಮನ್ನಾ, ಇಂದಿರಾ ಕ್ಯಾಂಟೀನ್, ಮಡಿಕೇರಿಯ ಹೈಟೆಕ್ ಮಾರುಕಟ್ಟೆ ಮತ್ತು ಖಾಸಗಿ ಬಸ್ ನಿಲ್ದಾಣ ಕಾಂಗ್ರೆಸ್ ಸರಕಾರದ ಕೊಡುಗೆ ಎಂದು ಅವರು ಹೇಳಿದರು.