ಸುಳ್ಯ: ಯುವ ಸಮುದಾಯ ಉತ್ಸಾಹದಿಂದ ಪಕ್ಷದ ಹಿತದೃಷ್ಟಿಯಿಂದ ಕೆಲಸಮಾಡಬೇಕು. ಪ್ರತಿ ಬೂತ್ ಮಟ್ಟದಲ್ಲಿ ಹೊಸಮತದಾರರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲು ಶ್ರಮ ಪಡಬೇಕೆಂದು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಮನುಮುತ್ತಪ್ಪ ಕರೆನೀಡಿದ್ದಾರೆ.

ಅವರು ಪೆರಾಜೆ ಬಿಜೆಪಿ ಯುವಮೋರ್ಚಾ ಮತ್ತು ಗ್ರಾಮ ಸಮಿತಿ ಆಶ್ರಯದಲ್ಲಿ ನಡೆದ ಸಂಪಾಜೆ ವಲಯದ ಯುವಮೋರ್ಚಾ ಸಮಾವೇಶದಲ್ಲಿ ಮಾತನಾಡಿದರು.

ಅಧ್ಯಕ್ಷತೆಯನ್ನು ಪೆರಾಜೆ ಯುವಮೋರ್ಚಾದ ಅಧ್ಯಕ್ಷ ಅಶೋಕ್ ಪೀಚೆ ವಹಿಸಿದರು. ಮುಖ್ಯ ಅತಿಥಿಗಳಾಗಿ ಯುವಮೋರ್ಚಾದ ಕೊಡಗು ಜಿಲ್ಲಾಧ್ಯಕ್ಷ ಕಾಳನ ರವಿ, ಮಡಿಕೇರಿ ತಾಲೂಕು ಅಧ್ಯಕ್ಷ ಧನಂಜಯ ಮಡಿಕೇರಿ, ತಾಲೂಕು ಪಂಚಾಯಿತಿ ಸದಸ್ಯ ನಾಗೇಶ್ ಕುಂದಲ್ಪಾಡಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಕವಿತಾ ಪ್ರಭಾಕರ, ಪೆರಾಜೆ ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಮೋನಪ್ಪ ಮಾಸ್ತರ್, ಪೆರಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮೀ ಧರಣೇಧರ ಭಾಗವಹಿಸಿದರು. ಪ್ರವೀಣ ಮಜಿಕೋಡಿ ಸ್ವಾಗತಿಸಿ, ಗ್ರಾಮ ಪಂಚಾಯಿತಿ ಸದಸ್ಯ ಉದಯಕುಮಾರ್ ಕುಂಬಳಚೇರಿ ವಂದಿಸಿದರು. ಮನೋಜ್ ನಿಡ್ಯಮಲೆ ಕಾರ್ಯಕ್ರಮ ನಿರೂಪಿಸಿದರು.