ಸೋಮವಾರಪೇಟೆ,ಮಾ.27: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ಯನ್ನು ಏಳು ವರ್ಷದ ಬಳಿಕ ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ.

ಏಳು ವರ್ಷ ಗಳಿಂದ ತಲೆಮರೆಸಿಕೊಂಡಿದ್ದ ಐಗೂರು ಗ್ರಾಪಂ ವ್ಯಾಪ್ತಿಯ ಸೂಳೆಬಾವಿ ಗಿರಿಜನ ಹಾಡಿಯ ಜೇನು ಕುರುಬರ ಕಾಳ ಎಂಬವರ ಪುತ್ರ ರಾಜ(42) ಎಂಬಾತನೆ ಬಂದಿತ ಆರೋಪಿಯಾಗಿದ್ದು, ಕಳೆದ 2011ರ ಮಾರ್ಚ್ 13ರಂದು ಜೇನು ಕುರುಬರ ಗಣಪ ಎಂಬವರ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ. ಆರೋಪಿ ರಾಜ ಕಿರಗಂದೂರು ಗ್ರಾಮದಲ್ಲಿರುವ ಬಗ್ಗೆ ದೊರೆತ ಖಚಿತ ವರ್ತಮಾನದ ಮೇರೆಗೆ ಇಲ್ಲಿನ ಠಾಣಾಧಿಕಾರಿ ಶಿವಣ್ಣ ಮತ್ತು ಸಿಬ್ಬಂದಿಗಳು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಧೀಶರ ಎದುರು ಹಾಜರುಪಡಿಸಿದ ಮೇರೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.