ಮಡಿಕೇರಿ, ಮಾ. 29: ಚುನಾವಣೆ ಸಂಬಂಧ ಗಡಿಭಾಗದ ಚೆಕ್ ಪೋಸ್ಟ್‍ನಲ್ಲಿ ಕರ್ತವ್ಯದಲ್ಲಿದ್ದ ಅಬಕಾರಿ ಇಲಾಖಾ ಅಧಿಕಾರಿಗಳು ಕರ್ತವ್ಯ ನಿರ್ಲಕ್ಷತೆ ತೋರಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಯೂ ಆಗಿರುವ ಜಿಲ್ಲಾಧಿಕಾರಿಗಳು ಈರ್ವರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.