ನಾಪೆÇೀಕ್ಲು, ಮಾ. 29: ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ ವ್ಯಾಪಿಯ ವಿಸ್ತರಣಾ ಶಿಕ್ಷಣ ಘಟಕ ಮಡಿಕೇರಿಯಿಂದ ಆರ್ಕಿಡ್ ಆಂಥೋರಿಯಂ ಕೃಷಿ ಕುರಿತಾದ ಒಂದು ದಿನದ ತರಬೇತಿ ಕಾರ್ಯಕ್ರಮ ನಾಪೆÇೀಕ್ಲು ಭಗವತಿ ಮಹಿಳಾ ಸಮಾಜದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಭಗವತಿ ಮಹಿಳಾ ಸಮಾಜದ ಅಧ್ಯಕ್ಷೆ ಚಿತ್ರಾ ನಾಣಯ್ಯ ಉದ್ಘಾಟಿಸಿದರು.

ಈ ಸಂದರ್ಭ ವಿಸ್ತರಣಾ ಶಿಕ್ಷಣ ಘಟಕದ ಮುಖ್ಯಸ್ಥ ಡಾ. ಆರ್.ಎನ್.ಕೆಂಚರೆಡ್ಡಿ, ಮಹಿಳಾ ಸಮಾಜದ ಉಪಾಧ್ಯಕ್ಷೆ ಕಸ್ತೂರಿ, ಕಾರ್ಯದರ್ಶಿ ರಾಣಿ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಕಾವೇರಿ ದೇವಯ್ಯ ಹಾಗೂ ಡಾ. ಅರ್ಚನಾ ಉಪಸ್ಥಿತರಿದ್ದರು.