ಮಡಿಕೇರಿ, ಮಾ. 29: ಜಿಲ್ಲೆಯಲ್ಲಿ ನಡೆಯುವ ಯಾವದೇ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಆಚರಣೆಗಳಿಗೆ ನೀತಿ ಸಂಹಿತೆ ಅಡ್ಡಿಯಾಗುವದಿಲ್ಲ ವೆಂದು ಜಿಲ್ಲಾ ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಇಂದು ನೀತಿಸಂಹಿತೆ ಕುರಿತು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಜಿಲ್ಲಾಧಿಕಾರಿ ಶ್ರೀವಿದ್ಯಾ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ. ಸತೀಶ್ ಇವರುಗಳನ್ನು ಮಾಧ್ಯಮದವರು ಪ್ರಶ್ನಿಸಿದರು.ಕ್ರೀಡೆ, ಧಾರ್ಮಿಕ ಜಾತ್ರೆ ಹಾಗೂ ಸಾಂಪ್ರದಾಯಿಕ ಆಚರಣೆಗಳಿಗೆ ಯಾವದೇ ನಿರ್ಬಂಧವಿಲ್ಲವೆಂದು ಸತೀಶ್ ಸ್ಪಷ್ಟಪಡಿಸಿದರಲ್ಲದೆ, ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಾಗೂ ಬ್ಯಾನರ್ ಅಳವಡಿಕೆಗೆ ಅನುಮತಿ ಪಡೆಯಬೇಕೆಂದರು.