ಶನಿವಾರಸಂತೆ, ಮಾ. 31: ಸ್ಥಳೀಯ ರೋಟರಿ ಸಂಸ್ಥೆ ವತಿಯಿಂದ ತಾ. 3 ರಂದು ವಿವಿಧ ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಹಾಗೂ ಬೆಳ್ಳಾರಳ್ಳಿ ವೃತ್ತದಲ್ಲಿ ನೂತನ ಮಾರ್ಗಸೂಚನಾ ಫಲಕಗಳನ್ನು ಅಳವಡಿಸಲಾಗುವದು. ಸಂಜೆ 6.30 ಕ್ಕೆ ಗುಡುಗಳಲೆಯ ಆರ್.ವಿ. ಕಲ್ಯಾಣ ಮಂಟಪದಲ್ಲಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಗವರ್ನರ್ ರೋಟರಿಯನ್ ಎಂ.ಎಂ. ಸುರೇಶ್ ಚೆಂಗಪ್ಪ ವಹಿಸುತ್ತಾರೆ. ಸಹ ಗವರ್ನರ್ ರೋಟರಿಯನ್ ಎನ್. ಮಹೇಶ್ ಕುಮಾರ್ ಹಾಗೂ ಪಿ.ಎಸ್. ಮೋಹನ್ ರಾಮ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುತ್ತಾರೆ ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಹೆಚ್.ಎಸ್. ವಸಂತ್ ಕುಮಾರ್ ಹಾಗೂ ಕಾರ್ಯದರ್ಶಿ ಎಸ್.ಎಸ್. ಸಾಗರ್ ತಿಳಿಸಿದ್ದಾರೆ.