ಗೋಣಿಕೊಪ್ಪಲು, ಏ. 6: ಇತ್ತೀಚೆಗೆ ಮೈಸೂರಿನ ವಿದ್ಯಾಶ್ರಮ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜು ತಂಡ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ. ಫೈನಲ್ ಪಂದ್ಯದಲ್ಲಿ ವೀರಾಜಪೇಟೆ ಕಾವೇರಿ ಕಾಲೇಜು ತಂಡದ ವಿರುದ್ಧ 2-0 ಗೋಲುಗಳ ಅಂತರದ ಜಯವನ್ನು ಸಾಧಿಸುವ ಮೂಲಕ ಗೋಣಿಕೊಪ್ಪಲು ಕಾವೇರಿ ಕಾಲೇಜು ವಿನ್ನರ್ ಪಟ್ಟ ಅಲಂಕರಿಸಿದರೆ ವೀರಾಜಪೇಟೆ ಕಾವೇರಿ ಕಾಲೇಜು ತಂಡ ರನ್ನರ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.

ವಿನ್ನರ್ ತಂಡದ ಪರ ಕವನ್ ಮತ್ತು ಸೋಮಣ್ಣ ತಲಾ 1 ಗೋಲು ಬಾರಿಸಿದರು. ಟೂರ್ನಿ ಯುದ್ದಕ್ಕೂ ಉತ್ತಮ ಪ್ರದರ್ಶನ ತೋರುವ ಮೂಲಕ ಒಟ್ಟು 6 ಗೋಲು ಬಾರಿಸಿದ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಸೋಮಣ್ಣ ಉತ್ತಮ ಆಟಗಾರ ಪ್ರಶಸ್ತಿ ಪಡೆದುಕೊಂಡರು. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲ ಪಟ್ಟಡ ಪೂವಣ್ಣ, ದೈಹಿಕ ಶಿಕ್ಷಣ ನಿರ್ಧೇಶಕ ಎಂ.ಟಿ. ಸಂತೋಷ್, ತರಬೇತುದಾರರಾದ ಮಿನ್ನಂಡ ಜೋಯಪ್ಪ ಹಾಗೂ ಚಿರಿಯಪ್ಪಂಡ ಸುಬ್ಬಯ್ಯ ಹರ್ಷ ವ್ಯಕ್ತ ಪಡಿಸಿದ್ದಾರೆ.