ಮಡಿಕೇರಿ, ಏ. 7: ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಕೊಡಗಿನ ಹಿರಿಯ ರಂಗಕರ್ಮಿ, ಸಾಹಿತಿ ಅಡ್ಡಂಡ ಕಾರ್ಯಪ್ಪ ನೇಮಕಗೊಂಡಿದ್ದಾರೆ. ಡಾ. ಚಂದ್ರಶೇಖರ್ ಕಂಬಾರರ ಅಧ್ಯಕ್ಷತೆಯ ಕೇಂದ್ರ ಕಾರ್ಯಕಾರಿ ಮಂಡಳಿ ನವದೆಹಲಿಯಲ್ಲಿ ನಡೆಸಿದ ಮೊದಲ ಸಭೆಯಲ್ಲಿ ಈ ನೇಮಕ ನಡೆದಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ದೇಶದ ಅಂಗೀಕೃತ 24 ಭಾಷೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕನ್ನಡ ಭಾಷೆಗೆ 5 ಜನ ಸದಸ್ಯರನ್ನು ಆಯ್ಕೆ ಮಾಡಿದೆ. ಹೀಗೆ ದೇಶದÀ 24 ಭಾಷೆಗಳಲ್ಲಿ ತಲಾ 5ರಂತೆ 120 ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ವಿಶೇಷವಾಗಿ ದೇಶದ ವಿವಿಧ ಭಾಗಗಳಲ್ಲಿ ಕಾರ್ಯಕ್ರಮ ಆಯೋಜಿಸುವದು, ಪುಸ್ತಕ ಪ್ರಕಟಣೆ, ಪ್ರಶಸ್ತಿಯನ್ನು ಕೊಡುವದು ಅಕಾಡೆಮಿಯ ಜವಾಬ್ದಾರಿಯಾಗಿರುತ್ತದೆ. ಸದಸ್ಯರ ಅವಧಿ ಮುಂದಿನ 5 ವರ್ಷಗಳ ಅವಧಿಯದಾಗಿರುತ್ತದೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಮಂಡಳಿಯಲ್ಲಿ ಕವಿ ಡಾ. ಸಿದ್ದಲಿಂಗಯ್ಯ, ಸಾಹಿತಿ ಸರಜುಕಾಟ್ಕರ್ ಇದ್ದಾರೆ. ಅಕಾಡೆಮಿಯ ಕಾರ್ಯದರ್ಶಿ ಡಾ. ಕೆ. ಶ್ರೀನಿವಾಸ್‍ರಾವ್ ಈ ಆದೇಶ ಹೊರಡಿಸಿದ್ದಾರೆ.