ಮಡಿಕೇರಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ದಲಿತ ಸಮುದಾಯ ಪ್ರಾದೇಶಿಕ ಪಕ್ಷ ಜೆ.ಡಿ.ಎಸ್.ಅನ್ನು ಬೆಂಬಲಿಸಲಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪ್ರಮುಖ ಹಾಗೂ ಜೆ.ಡಿ.ಎಸ್.ನ ಎಸ್.ಸಿ. ಘಟಕದ ಮಾಜಿ ಜಿಲ್ಲಾಧ್ಯಕ್ಷ ಹೆಚ್.ಎನ್. ಯೋಗೇಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯ ಮಾತ್ರವಲ್ಲದೆ ಜಿಲ್ಲೆಯ ದಲಿತ ಸಮುದಾಯ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಡಳಿತ ವ್ಯವಸ್ಥೆಗೆ ಮನವಿ ಸಲ್ಲಿಸಿದ್ದರೂ ಯಾವದೇ ಸ್ಪಂದನ ದೊರೆತ್ತಿಲ್ಲ ಎಂದು ದೂರಿದ್ದಾರೆ.