ಶನಿವಾರಸಂತೆ, ಏ. 7: ಪಟ್ಟಣದ ಭಾರತಿ ವಿದ್ಯಾಸಂಸ್ಥೆ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸಮಾರೋಪ ಸಮಾರಂಭ ತಾ. 9 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಉಪನ್ಯಾಸಕ ಈ.ಎಂ. ದಯಾನಂದ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾವಿದ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರ ಎಚ್.ಪಿ. ರೋಹಿನ್, ನಾಗೇಶ್ ಮತ್ತು ಶಿಡಿಗಳಲೆ ಗ್ರಾಮ ಕೃಷಿಕ ಎಸ್.ಎಂ. ಮೋಹನ್ ಪಾಲ್ಗೊಳ್ಳಲಿದ್ದಾರೆ.