ಮಡಿಕೇರಿ, ಮೇ 20: ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ಯುವಕ-ಯುವತಿಯರಿಗಾಗಿ “ರಾಷ್ಟ್ರೀಯ ಯುವ ಸ್ವಯಂ ಸೇವಕ” ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಪ್ರಸ್ತುತ ಸಾಲಿನಲ್ಲಿಯೂ ಈ ಯೋಜನೆ ಮುಂದುವರೆಯಲಿದೆ. ಯೋಜನೆಯ ಉದ್ದೇಶ ಯುವಜನರನ್ನು ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವದು. ಇದರ ಅನ್ವಯ ದೇಶದಾದ್ಯಂತ ಇಪ್ಪತ್ತು ಸಾವಿರ (20000) ಯುವಜನರನ್ನು “ರಾಷ್ಟ್ರೀಯ ಯುವ” ಸ್ವಯಂ ಸೇವಕರನ್ನು ಪೂರ್ಣ ಪ್ರಮಾಣದಲ್ಲಿ ಒಂದು ವರ್ಷಗಳ ಅವಧಿಗೆ ನಿಯೋಜಿಸಿಕೊಳ್ಳಲಾಗುತ್ತಿದೆ. ಆಯ್ಕೆಯಾದವರಿಗೆ ಸೂಕ್ತ ಗೌರವ ಧನ, ವಿಶೇಷ ತರಬೇತಿ ನೀಡಲಾಗುವದು.
ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 3 ತಾಲೂಕುಗಳಿಂದ ತಲಾ 2 ಜನರÀಂತೆÉ ಒಟ್ಟು 6 ಜನ ಯುವಕ-ಯುವತಿಯರನ್ನು ಆಯಾಯ ತಾÀಲೂಕಿನಿಂದ ನೇಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಈ ಕೆಳಕಂಡ ಅರ್ಹತೆಗಳನ್ನು ಹೊಂದಿರುವವರು ಕೆಲವು ನಿಬಂಧನೆಗೆ ಒಳಪಟ್ಟು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನೇಮಕವಾದ ಸ್ವಯಂ ಸೇವಕರನ್ನು ಆಯಾಯ ತಾಲೂಕಿಗೆ ನಿಯೋಜಿಸಲಾಗುವದು.
ಅರ್ಜಿ ಸಲ್ಲಿಸುವವರು ತಾ. 31 ಕ್ಕೆ ಕನಿಷ್ಟ 18 ವರ್ಷದಿಂದ ಗರಿಷ್ಠ 29 ವರ್ಷದ ವ್ಯಾಪ್ತಿಯೊಳಗಿರಬೇಕು. ಕನಿಷ್ಟ ವಿದ್ಯಾರ್ಹತೆ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿದವರಾಗಿರಬೇಕು. ವಿದ್ಯಾಭ್ಯಾಸದಲ್ಲಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳು ಯಾವದೇ ಕಾರಣದಿಂದಲೂ ಅರ್ಜಿ ಸಲ್ಲಿಸಲು ಅರ್ಹರಲ್ಲ. ಈಗಾಗಲೇ ರಾಷ್ಟ್ರೀಯ ಸ್ವಯಂ ಸೇವಕರಾಗಿ ಹಿಂದಿನ ಯೋಜನೆಗಳಲ್ಲಿ ಸೇವೆ ಸಲ್ಲಿಸಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ. ಯುವಕ, ಯುವತಿ, ಮಹಿಳಾ ಮಂಡಳಿಯಲ್ಲಿ ಸೇವೆ ಸಲ್ಲಿಸಿರುವವರಿಗೆ ಆಯ್ಕೆಯಲ್ಲಿ ಆದ್ಯತೆ ನೀಡಲಾಗುವದು.
ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಎನ್.ಸಿ.ಸಿ.ಯಲ್ಲಿ ಪಾಲ್ಗೊಂಡಿರುವವರಿಗೆ ಆದ್ಯತೆ ಇದೆ. ನಿಯಮಾನುಸಾರ ಯುವತಿಯವರಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ಇದೆ. ಕಂಪ್ಯೂಟರ್ ಜ್ಞಾನ ಹೊಂದಿರುವವರಿಗೆ ವಿಶೇಷ ಆದ್ಯತೆ ಇದೆ. ರಾಷ್ಟ್ರೀಯ ಯುವ ಸ್ವಯಂ ಸೇವಕರ ಅವಧಿ ಒಂದು ವರ್ಷಗಳು ಮಾತ್ರ. ರಾಷ್ಟ್ರೀಯ ಯುವ ಸ್ವಯಂ ಸೇವಕರಾಗಿ ಆಯ್ಕೆಯಾದವರಿಗೆ ಮಾಸಿಕ ರೂ. 5000 (ಐದು ಸಾವಿರ ರೂಪಾಯಿಗಳು ಮಾತ್ರ) ಗೌರವಧನವಾಗಿ ನೀಡಲಾಗುವದು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಆಯ್ಕೆ ಸಮಿತಿಯು ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳ ಸಂದರ್ಶನವನ್ನು ನಡೆಸಿ ಆಯ್ಕೆಯನ್ನು ಘೋಷಿಸಲಿದೆ.
ಮೇಲ್ಕಂಡ ನಿಬಂಧನೆಗೆ ಒಳಪಟ್ಟು ಅರ್ಜಿ ಸಲ್ಲಿಸಲು ಇಚ್ಚಿಸುವ ಯುವಕ-ಯುವತಿಯರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಯುವಜನ ಸಮನ್ವಯಾಧಿಕಾರಿ, ನೆಹರು ಯುವ ಕೇಂದ್ರ, ಯಶು ನಿ¯ಯ, ಬ್ಲಾಕ್ ನಂ:8, ಕಾವೇರಿ ಲೇಔಟ್, ಮಡಿಕೇರಿ ಇವರಿಂದ ಕಾರ್ಯಾಲಯದ ಕೆಲಸದ ವೇಳೆಯಲ್ಲಿ ಪಡೆದು ಅಥವಾ ಓ.ಙ.ಏ.Websiಣe ತಿತಿತಿ.ಟಿಥಿಞs.oಡಿg ಆoತಿಟಿ ಐoಚಿಜ ಮಾಡಿಕೊಂಡು ತಾ. 31 ರಂದು ಸಂಜೆ 5 ಘಂಟೆಯ ಒಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ 08272-225470 ದೂರವಾಣಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.