ಸೋಮವಾರಪೇಟೆ,ಮೇ.21: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಈ ಬಾರಿ ಹತ್ತನೆ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ.100ರಷ್ಟು ಅಂಕಗಳಿಸಿದ ತಾಲೂಕಿನ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವದು ಎಂದು ಅಧ್ಯಕ್ಷ ಎಸ್.ಡಿ.ವಿಜೇತ್ ತಿಳಿಸಿದ್ದಾರೆ.

ಶೇ. 100 ಅಂಕಪಡೆದ ವಿದ್ಯಾರ್ಥಿಗಳು ಅಂಕಪಟ್ಟಿ ಪ್ರತಿ ಹಾಗೂ ಭಾವಚಿತ್ರವನ್ನು ಕ.ಸಾ.ಪ ಅಧ್ಯಕ್ಷರು ಅಥವಾ ಕಾರ್ಯದರ್ಶಿಗಳಿಗೆ ತಾ. 30ರ ಒಳಗೆ ತಲಪಿಸಬೇಕು. ಹೆಚ್ಚಿನ ಮಾಹಿತಿಗಾಗಿ 9845005453ನ್ನು ಸಂಪರ್ಕಿಸಬಹುದಾಗಿದೆ.