ಮಡಿಕೇರಿ, ಮೇ 29: ಜಿಲ್ಲೆಯ ಮಡಿಕೇರಿ ತಾಲೂಕಿನ ಎಮ್ಮೆಮಾಡು ಮತ್ತು ಮದೆ ಹಾಗೂ ವೀರಾಜಪೇಟೆ ತಾಲೂಕಿನ ಕಣ್ಣಂಗಾಲ ಮತ್ತು ಹಾತೂರು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ.

ವೇಳಾಪಟ್ಟಿ ವಿವರ ಇಂತಿದೆ: ತಾ. 30 ರಂದು ಜಿಲ್ಲಾಧಿಕಾರಿ ಅವರು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ಜೂನ್ 2 ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಜೂನ್ 4 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ಜೂನ್ 6 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಜೂನ್ 14 ರಂದು ಮತದಾನದ ಅವಶ್ಯವಿದ್ದರೆ ಮತದಾನ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ. ಜೂ. 15 ರಂದು ಮರು ಮತದಾನ ಅವಶ್ಯವಿದ್ದರೆ, ಮತದಾನ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಜೂ. 17 ರಂದು ಬೆಳಿಗ್ಗೆ 8 ಗಂಟೆಯಿಂದ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾ.ಪಂ. ವ್ಯಾಪ್ತಿಯ ಎಮ್ಮೆಮಾಡು-1, ಎಮ್ಮೆಮಾಡು-2 ರಲ್ಲಿ ತಲಾ ಒಂದು ಸ್ಥಾನ ಮತ್ತು ಮದೆ ಗ್ರಾ.ಪಂ.ನಲ್ಲಿ ಒಂದು ಹಾಗೂ ವೀರಾಜಪೇಟೆ ತಾಲೂಕಿನ ಕಣ್ಣಂಗಾಲ ಗ್ರಾ.ಪಂ.ನಲ್ಲಿ ಒಂದು ಹಾಗೂ ಹಾತೂರು ಗ್ರಾ.ಪಂ.ವ್ಯಾಪ್ತಿಯ ಕೈಕೆರಿಯಲ್ಲಿ ಒಂದು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 308 ಎಸಿ ಪ್ರಕಾರ ಚುನಾವಣಾ ಮಾದರಿ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತಾ. 30 ರಿಂದ ಜೂನ್ 17 ರವರೆಗೆ ಜಾರಿಯಲ್ಲಿರುತ್ತದೆ. ಗ್ರಾ.ಪಂ. ಯಾವದೇ ಕ್ಷೇತ್ರದಲ್ಲಿ ನಾಮಪತ್ರ ಸ್ವೀಕೃತವಾಗದೇ ಚುನಾವಣೆ ಪ್ರಕ್ರಿಯೆ ಮುಂದುವರೆಯಲಾಗದೆ ಇರುವಂತಹ ಗ್ರಾ.ಪಂ.ಗಳಲ್ಲಿ ಹಾಗೂ ಅಭ್ಯರ್ಥಿಗಳ ನಾಮಪತ್ರ ತಿರಸ್ಕøತ/ನಾಮಪತ್ರ ಹಿಂತೆಗೆತ ಮತ್ತಿತರ ಕಾರಣಗಳಿಂದ ಯಾವದೇ ಅಭ್ಯರ್ಥಿಯು ಕಣದಲ್ಲಿರದೆ ಆ ಗ್ರಾ.ಪಂ.ನ ಯಾವದೇ ಸ್ಥಾನಕ್ಕೂ ಚುನಾವಣೆ ನಡೆಯದೇ ಇದ್ದಲ್ಲಿ ಅಥವಾ ಗ್ರಾ.ಪಂ.ನಲ್ಲಿ ಚುನಾವಣೆ ಘೋಷಿಸಿ ರುವ ಎಲ್ಲಾ ಸ್ಥಾನಗಳೂ ಅವಿರೋಧ ವಾಗಿ ಆಯ್ಕೆಯಾಗಿದ್ದ, ಆಯ್ಕೆಯಾದ ಅಭ್ಯರ್ಥಿಯ ಫಲಿತಾಂಶವನ್ನು ಚುನಾವಣಾಧಿಕಾರಿಯು ಘೋಷಿಸಿದ್ದಲ್ಲಿ ಅಂತಹ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವದಿಲ್ಲ.

ಚುನಾವಣಾಧಿಕಾರಿಗಳ ನೇಮಕ: ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾ.ಪಂ.ಗೆ ಚುನಾವಣಾಧಿಕಾರಿಯಾಗಿ ಎ.ಸಿ. ಗಿರೀಶ್ ಹಾಗೂ ಸಹಾಯಕ ಚುನಾವಣಾ ಅಧಿಕಾರಿಯಾಗಿ ಎಸ್. ರಾಜೇಶ್, ಮದೆ ಗ್ರಾ.ಪಂ. ಚುನಾವಣಾಧಿಕಾರಿಯಾಗಿ ರಾಮದಾಸ್ ಎಸ್.ವಿ., ಹಾಗೂ ಸಹಾಯಕ ಚುನಾವಣಾ ಅಧಿಕಾರಿಯಾಗಿ ಎಂ.ಪಿ. ಪ್ರಸನ್ನ ಮತ್ತು ವೀರಾಜಪೇಟೆ ತಾಲೂಕಿನ ಕಣ್ಣಂಗಾಲ ಗ್ರಾ.ಪಂ.ಗೆ ಚುನಾವಣಾಧಿಕಾರಿಯಾಗಿ ಪ್ರಮೋದ್ ಗಜಿನಿಕರ್ ಹಾಗೂ ಸಹಾಯಕ ಚುನಾವಣಾ ಅಧಿಕಾರಿಯಾಗಿ ಚೈತ್ರ ಜೆ. ಹಿರೇಮಠ್, ಹಾತೂರು ಗ್ರಾ.ಪಂ.ಗೆ ಚುನಾವಣಾ ಧಿಕಾರಿಯಾಗಿ ಹೆಚ್.ಎನ್. ನಟೇಶ್ ಕುಮಾರ್, ಸಹಾಯಕ ಚುನಾವಣಾ ಅಧಿಕಾರಿಯಾಗಿ ಪಿ.ಎ. ಪೂಣಚ್ಚ ಅವರನ್ನು ನೇಮಿಸಲಾಗಿದೆ.

ತಾ. 30 ರಿಂದ ಜೂನ್ 2 ರವರೆಗೆ ಸಂಬಂಧಪಟ್ಟ ಗ್ರಾ.ಪಂ. ಕಚೇರಿಯಲ್ಲಿ ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿಗಳಿಗೆ ನಾಮ ಪತ್ರವನ್ನು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಸಲ್ಲಿಸಬಹುದಾಗಿದೆ. ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಗ್ರಾ.ಪಂ. ಚುನಾವಣೆಯ ಮತ ಪತ್ರದಲ್ಲಿ ನೋಟಾಗೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ-ಜಿಲ್ಲಾ ಚುನಾವಣಾಧಿ ಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.