ನಾಪೆÇೀಕ್ಲು, ಜೂ. 18: ಬಿಟ್ಟಂಗಾಲ ಶ್ರೀ ಮಹಾವಿಷ್ಣು ದೇವಳದಲ್ಲಿ ಅಷ್ಪಬಂಧ ಬ್ರಹ್ಮಕಲಶೋತ್ಸವ ತಾ. 19 ಮತ್ತು 20ರಂದು ನಡೆಯಲಿದೆ.

ಕಣ್ಣಂಗಾಲ ಶ್ರೀ ಶಂಕರನಾರಾಯಣ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 19 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಪುಣ್ಯಾಹ ವಾಚನ, ಗಣಹೋಮ, ಮಹಾಪೂಜೆ, ಸಂಜೆ 6ರಿಂದ ಪ್ರಸಾದ ಶುದ್ಧಿ, ವಾಸ್ತು ರಕ್ಷೋಘ್ನ ಹೋಮ, ಬಿಂಬ ಶುದ್ಧಿ, ಕಲಶಾಭಿಷೇಕ, ಮಹಾಪೂಜೆ ನಡೆಯಲಿದೆ.

20ರಂದು ಬೆಳಿಗ್ಗೆ ಗಣಹೋಮ, ಕಲಶ ಪೂಜೆ, ಅಧಿವಾಸ ಹೋಮ, ಬ್ರಹ್ಮ ಕಲಶಾಭಿಷೇಕ, ಅಷ್ಟಬಂಧ ಲೇಪನ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಳದ ತಕ್ಕಮುಖ್ಯಸ್ಥರು ಮತ್ತು ಆಡಳಿತ ಮಂಡಳಿ ತಿಳಿಸಿದೆ.