ಸುಂಟಿಕೊಪ್ಪ, ಜೂ. 19 : ಕೆದಕಲ್ ಭದ್ರಕಾಳೇಶ್ವರಿ ದೇವಸ್ಥಾನದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಮತ್ತು ಜೀಪಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೆದಕಲ್ ಭದ್ರಕಾಳೇಶ್ವರಿ ದೇವಸ್ಥಾನದ ತಿರುವಿನಲ್ಲಿ ಸುಂಟಿಕೊಪ್ಪ ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಜೀಪ್ (ಕೆಎ18ಎಂಎಫ್ 5886) ಮಂಗಳೂರಿನಿಂದ ಕುಶಾಲನಗರ ಕಡೆಗೆ ಆಗಮಿಸುತ್ತಿದ್ದ ಪೆಟ್ರೋಲಿಯಂ ತುಂಬಿದ ಟ್ಯಾಂಕರ್ (ಕೆಎ19ಎಬಿ0699) ನಡುವೆ ರಾತ್ರಿ 10.30 ಗಂಟೆಯ ಸಂದರ್ಭದಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಜೀಪು ಹಾಗೂ ಲಾರಿಯ ಚಾಲಕರುಗಳೂ ಸಣ್ಣ ಪುಟ್ಟಗಾಯಗಳಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಂಡಿದ್ದಾರೆ.