ಕೇಂದ್ರ ರಕ್ಷಣಾ ಇಲಾಖೆಯ ಅಧೀನದಲ್ಲಿರುವ ಕೂಡಿಗೆ ಸೈನಿಕ ಶಾಲೆಯಲ್ಲಿ ನಡೆದ ಬಾಲಕನ ಸಾವು ಪ್ರಕರಣ ರಾಷ್ಟ್ರಮಟ್ಟದಲ್ಲಿಯೂ ಗಂಭೀರತೆ ಪಡೆದುಕೊಂಡಿದೆ. ಸಂಸದ ಪ್ರತಾಪ್‍ಸಿಂಹ ಅವರನ್ನು ‘ಶಕ್ತಿ’ ಸಂಪರ್ಕಿಸಿದಾಗ ತಾನು ಈ ಪ್ರಕರಣದ ಕುರಿತು ಕೇಂದ್ರ ರಕ್ಷಣಾ ಸಚಿವ ನಿರ್ಮಲ ಸೀತಾರಾಮನ್ ಅವರ ಗಮನಕ್ಕೆ ತಂದಿರುವದಾಗಿ ತಿಳಿಸಿದರು. ರಕ್ಷಣಾ ಸಚಿವಾಲಯ ಕೂಡ ಈ (ಮೊದಲ ಪುಟದಿಂದ) ಬಗ್ಗೆ ಸಮರ್ಪಕ ತನಿಖೆ ನಡೆಸುವಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆಗೆ ನಿರ್ದೇಶನವಿತ್ತಿರುವದಾಗಿ ತಿಳಿದು ಬಂದಿದೆ. ಈ ಪ್ರಕರಣ ಸಂಬಂಧ ಪ್ರಾಂಶುಪಾಲರಾದ ಲಾಲ್ ಅವರನ್ನು ಅಮಾನತಿನಲ್ಲಿಡುವಂತೆ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ. ಅಲ್ಲದೇ ಈ ಬಗ್ಗೆ ಪ್ರತ್ಯೇಕ ತನಿಖೆ ನಡೆಸಲು ಕ್ರಮಕೈಗೊಳ್ಳಲಿದ್ದು, ಸೈನಿಕ ಶಾಲೆಯ ಆಂತರಿಕ ವ್ಯವಹಾರಗಳಲ್ಲಿನ ಅಸಂಬದ್ಧ ಕಾರ್ಯವೈಖರಿಯನ್ನು ಸರಿಪಡಿಸಲು ಸೂಕ್ತ ಕ್ರಮಕೈಗೊಳ್ಳಲಿರುವದಾಗಿಯೂ ಅವರು ಖಚಿತಪಡಿಸಿದರು.