ಚೆಟ್ಟಳ್ಳಿ, ಜೂ. 25: ಸುಂಟಿಕೊಪ್ಪ ಸಮೀಪದ ಅತ್ತೂರು ನಲ್ಲೂರು ಗ್ರಾಮದಲ್ಲಿ ರಾಬರ್ಟ್ ಎಂಬವರಿಗೆ ಸೇರಿದ ಗರ್ಭಹೊಂದಿರುವ ಹಸುವನ್ನು ಹುಲಿ ಧಾಳಿಮಾಡಿ ಕೊಂದು ಹಾಕಿರುವ ಘಟನೆ ನಡೆದಿದೆ.ರಾಬರ್ಟ್ ಎಂಬವರು ಸಾಕುತಿದ್ದ ಜಾತಿ ಹಸು ಮೇಯಲು ಹೋದ ಸಂದರ್ಭ ಕಳೆದೆರಡು ದಿನಗಳಿಂದ ಕಾಣೆಯಾಗಿತ್ತು ಮನೆಯ ಹತ್ತಿರ ತೊರೆಯ ಬದಿಯಲ್ಲಿ ನೀರು ಕುಡಿಯಲು ಹೋದ ಸಂದರ್ಭ ಮೀನುಕೊಲ್ಲಿ ಅರಣ್ಯದಿಂದ ಬಂದ ಹುಲಿ ಧಾಳಿ ಮಾಡಿದ ಬಗ್ಗೆ ಸಂಶಯ ವ್ಯಕ್ತಪಡಿಸಲಾಗಿದೆ. ಮಾಹಿತಿ ದೊರೆತ ಮೇರೆಗೆ ಉಪವಲಯ ಅರಣ್ಯಾಧಿಕಾರಿ ಕನ್ನಂಡ ರಂಜನ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮಾರನೆಯ ದಿನ ಹುಲಿ ಬಂದು ಹಸುವಿನ ಮಾಂಸ ತಿಂದುಹಾಕಿದೆ. ಚೆಟ್ಟಳ್ಳಿ ಪಶುವೈದ್ಯಾಧಿಕಾರಿ ಡಾ. ಸಂಜೀವಕುಮಾರ್ ಸಿಂಧೆ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಸುತ್ತಮುತ್ತಲ ಪ್ರದೇಶದಲ್ಲಿ ಹುಲಿಯ ಚಲನವಲನ ಇರುವ ಬಗ್ಗೆ ಸಾರ್ವಜನಿಕರು ಆತಂಕ ಗೊಂಡಿದ್ದಾರೆ.

-ಕರುಣ್ ಕಾಳಯ್ಯ