ನವದೆಹಲಿ ಜು.2 : ಸುಪ್ರೀಂ ಕೋರ್ಟ್ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೋಮವಾರ ಕರ್ನಾಟಕಕ್ಕೆ ಸೂಚನೆ ನೀಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚೆ ನಡೆಸಿ, ಸುಪ್ರೀಂ ಆದೇಶದಂತ ಕರ್ನಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ. ಹೀಗಾಗಿ ಕೇಂದ್ರ ಜಲ ಆಯೋಗದಿಂದ ಅಂಕಿ-ಅಂಶ ಪಡೆದು ನೀರನ್ನು ಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳುವದಾಗಿ ಕರ್ನಾಟಕ ತಿಳಿಸಿದೆ. ಕೇಂದ್ರ ಜಲಮಂಡಳಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಎಸ್. ಮಸೂದ್ ಹುಸೇನ್ ನೇತೃತ್ವದಲ್ಲಿ ಸಭೆಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಜಲ ಸಂಪನ್ಮೂಲ ಇಲಾಖೆ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರು ಭಾಗವಹಿಸಿದ್ದರು.