ಮಡಿಕೇರಿ, ಜು. 2: ಇತ್ತೀಚಿಗಿನ ಮಳೆಯಿಂದ ಭೂಕುಸಿತದೊಂದಿಗೆ ಹಾನಿಗೊಂಡಿರುವ ಮಾಕುಟ್ಟ ಹೆದ್ದಾರಿ ಯಲ್ಲಿ ರಸ್ತೆಯನ್ನು ಆವರಿಸಿಕೊಂಡಿದ್ದ ಭೂ ಕುಸಿತದ ಮಣ್ಣು ಹಾಗೂ ಮರ, ಬಂಡೆಗಳ ತೆರವು ಕಾರ್ಯಾಚರಣೆ ಮುಕ್ತಾಯ ಹಂತ ತಲಪಿದ್ದು, ಶೀಘ್ರವೇ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಲಘು ವಾಹನಗಳ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.

ಮಾಕುಟ್ಟ ಹೆದ್ದಾರಿ ಅಭಿವೃದÐಧಿ ಕುರಿತು ‘ಶಕ್ತಿ’ ಪ್ರತಿಕ್ರಿಯೆ ಬಯಸಿದಾಗ, ಈ ಸಂಬಂಧ ಲೋಕೋಪಯೋಗಿ ಇಲಾಖೆ, ಸಾರಿಗೆ ಪ್ರಾಧಿಕಾರ ಅಧಿಕಾರಿಗಳು ಸೇರಿದಂತೆ ತಾಂತ್ರಿಕ ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವದು ಎಂದು ಸ್ಪಷ್ಟಪಡಿಸಿದರು. ಲೋಕೋಪಯೋಗಿ ಸಹಾಯಕ ಕಾರ್ಯಪಾಲಕ ಅಭಿಯಂತರ ಸುರೇಶ್ ಕೂಡ ಲಘು ವಾಹನಗಳಿಗೆ ನಾಲ್ಕಾರು ದಿನಗಳಲ್ಲಿ ಅನುವು ಮಾಡಿಕೊಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.