ಮಡಿಕೇರಿ, ಜು. 6: ನಗರದ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ನೂತನ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭ ಮಡಿಕೇರಿ ಕೊಡವ ಸಮಾಜ ಹಾಗೂ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ.ಎಸ್. ದೇವಯ್ಯ ಅವರ ಅಧ್ಯಕ್ಷತೆಯಲ್ಲಿ ತಾ. 4 ರಂದು ಜರುಗಿತು. ಈ ವೇಳೆ ಮಾತನಾಡಿದ ಅವರು, ಮಕ್ಕಳು ಪಠ್ಯಕ್ರಮದೊಂದಿಗೆ ಇತರ ಪ್ರತಿಭಾನ್ವಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಏಳಿಗೆ ಸಾಧಿಸುವಂತೆ ಕರೆ ನೀಡಿದರು.

ಗೋಣಿಕೊಪ್ಪಲು ಕಾವೇರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪಿ.ಎ. ಪೂವಣ್ಣ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮಲ್ಲಿರುವ ಚೈತನ್ಯದೊಂದಿಗೆ ಪ್ರತಿಭೆ ಹೊರ ಹಾಕುವ ಮುಖಾಂತರ ನಾಯಕತ್ವ ಗುಣ ಬೆಳೆಸಿಕೊಳ್ಳುವಂತೆ ತಿಳಿ ಹೇಳಿದರು.

ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಅಲ್ಲದೆ ಸಾಂಸ್ಕøತಿಕ ಚಟುವಟಿಕೆ ನಡೆಯಿತು. ಪ್ರಾಂಶುಪಾಲರು, ಉಪನಾಯಕ ವೃಂದ, ಆಡಳಿತ ಮಂಡಳಿ ಪ್ರಮುಖರ ಸಹಿತ ವಿದ್ಯಾರ್ಥಿ ಸಮೂಹ ಪಾಲ್ಗೊಂಡಿದ್ದರು.