ಮಡಿಕೇರಿ, ಜು. 8: ನಗರದ ಜ. ತಿಮ್ಮಯ್ಯ ವೃತ್ತದ ಬಳಿ ಅಕ್ರಮ ಗಾಂಜಾ ಮಾರಾಟದಲ್ಲಿ ತೊಡಗಿದ್ದು, ವೀರಾಜಪೇಟೆ ನೆಹರು ನಗರ ನಿವಾಸಿ, ಖಮರುದ್ದೀನ್ ಎಂಬವರ ಪುತ್ರ ಸಜೀರ್ (27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ಪಿ. ರಾಜೇಂದ್ರ ಪ್ರಸಾದ್ ಮಾರ್ಗದರ್ಶನ ದಲ್ಲಿ ವೃತ್ತ ನಿರೀಕ್ಷಕ ಮೇದಪ್ಪ ಹಾಗೂ ಠಾಣಾಧಿಕಾರಿ ಷಣ್ಮುಖಪ್ಪ ಮತ್ತು ಸಿಬ್ಬಂದಿ 200 ಗ್ರಾಂ ಗಾಂಜಾ ಸಹಿತ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.