ಸುಂಟಿಕೊಪ್ಪ, ಜು. 12: ಗದ್ದೆಹಳ್ಳದ ಗಿರಿಯಪ್ಪ ಮನೆಗೆ ತೆರಳುವ ಸಾರ್ವಜನಿಕ ರಸ್ತೆ ಬದಿಯಲ್ಲಿ ತಡೆಗೋಡೆ ಇಲ್ಲದೆ ಅಪಘಾತಗಳು ಸಂಭವಿಸುತ್ತಿವೆ. ಈ ಜಾಗದಲ್ಲಿ ತಡೆಗೋಡೆ ನಿರ್ಮಿಸಿ ಕೊಡುವಂತೆ ಈ ಭಾಗದ ನಿವಾಸಿಗಳು ತಾಲೂಕು ಪಂಚಾಯಿತಿ ಸದಸ್ಯೆ ಒಡಿಯಪ್ಪನ ವಿಮಲಾವತಿ ಅವರಲ್ಲಿ ಮನವಿ ಮಾಡಿದ್ದರು. ಇದನ್ನು ಮನಗಂಡ ತಾಲೂಕು ಪಂಚಾಯಿತಿ ಸದಸ್ಯೆ ಒಡಿಯಪ್ಪನ ವಿಮಲಾವತಿ ತಮ್ಮ ಅನುದಾನದಲ್ಲಿ ರೂ. 1 ಲಕ್ಷ ಹಣ ಬಿಡುಗಡೆಗೊಳಿಸಿ ತಡೆಗೋಡೆ ಕಾಮಗಾರಿಗೆ ಚಾಲನೆ ನೀಡಿದ್ದಾರೆ.