ಮಡಿಕೇರಿ, ಆ. 2: ಮೂರ್ನಾಡು ವಿದ್ಯಾಸಂಸ್ಥೆ, ಜಾನಪದ ಪರಿಷತ್‍ನ ಮೂರ್ನಾಡು ಹೋಬಳಿ ಘಟಕದ ವತಿಯಿಂದ ತಾ. 4 ರಂದು ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ಕಕ್ಕಡ ಮಾಸದ ಆಟಿ ಊಟ ಕಾರ್ಯಕ್ರಮ ಆಯೋಜಿಸಲಾಗಿದೆ.

ಮೂರ್ನಾಡು ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಮಧ್ಯಾಹ್ನ 1 ಗಂಟೆಗೆ ಜರುಗುವ ಕಾರ್ಯಕ್ರಮದಲ್ಲಿ ಕಕ್ಕಡ ಮಾಸದಲ್ಲಿ ಕೊಡಗಿನಲ್ಲಿ ತಯಾರಿಸಲಾಗುವ ವೈವಿಧ್ಯಮಯ ತಿನಿಸುಗಳು, ಖಾದ್ಯಗಳನ್ನು ಈ ಸಂದರ್ಭ ಪ್ರದರ್ಶಿಸಲಾಗುತ್ತದೆ. ವಿದ್ಯಾಸಂಸ್ಥೆಯ ಅಧ್ಯಕ್ಷ ಬಿ.ಜಿ. ಮಾದಪ್ಪ, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ, ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಎಚ್.ಟಿ. ಮತ್ತು ಘಟಕದ ಸದಸ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂರ್ನಾಡು ಹೋಬಳಿ ಜಾನಪದ ಪರಿಷದ್ ಅಧ್ಯಕ್ಷ ಎಸ್.ಡಿ. ಪ್ರಶಾಂತ್ ತಿಳಿಸಿದ್ದಾರೆ.