ಮಡಿಕೇರಿ, ಆ.2 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಇವರ ವತಿಯಿಂದ ತಾ. 6ರಂದು ಬೆಳಿಗ್ಗೆ 10 ಗಂಟೆಗೆ ನಗರದ ಡಿ.ದೇವರಾಜು ಅರಸು ಭವನದಲ್ಲಿ ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಬಿ. ಕಾಳಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ, ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕಿ ಬಿ.ಬಿ.ಸಾವಿತ್ರಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತೆ ಜಿಮ್ಮಿ ಸಿಕ್ವೇರಾ ಇತರರು ಪಾಲ್ಗೊಳ್ಳಲಿದ್ದಾರೆ.