ಕುಶಾಲನಗರ, ಆ. 14: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಗುಡ್ಡೆಹೊಸೂರು ಗ್ರಾಮದ ಪ್ರಗತಿಪರ ರೈತ ಧನಪಾಲ್ ಗದ್ದೆಯಲ್ಲಿ ನಾಟಿ ತರಬೇತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕೃಷಿ ಇಲಾಖೆಯ ಅಧಿಕಾರಿ ಪೂಣಚ್ಚ ಭತ್ತದ ನಾಟಿ ಪ್ರಕ್ರಿಯೆ ಬಗ್ಗೆ ಮಾಹಿತಿ ಒದಗಿಸಿದರು. ಸಾಲು ನಾಟಿ ಮಾಡುವ ಮೂಲಕ ಹೆಚ್ಚಿನ ಇಳುವರಿ ಪಡೆದುಕೊಳ್ಳುವ ಬಗ್ಗೆ ಅವರು ತರಬೇತಿ ನೀಡಿದರು.

ಈ ಸಂದರ್ಭ ಕೃಷಿ ಇಲಾಖೆ ಮಾರುಕಟ್ಟೆ ಅಧಿಕಾರಿ ರವೀಂದ್ರ ಪಾಟೀಲ್, ಯೋಜನೆ ವಲಯ ಮೇಲ್ವಿಚಾರಕ ಕೆ.ಹರೀಶ್, ಕೃಷಿ ಅಧಿಕಾರಿ ಗೀತಾ ಹಾಗೂ ಸೇವಾ ಪ್ರತಿನಿಧಿಗಳು ಇದ್ದರು.