ಶ್ರೀಮಂಗಲ, ಆ. 22: ಶ್ರೀಮಂಗಲ ವನ್ಯಜೀವಿ ವಲಯ ವ್ಯಾಪ್ತಿಯ ಕುರ್ಚಿ, ಬೀರುಗ, ಇರ್ಪು ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ತಾ. 23ರಂದು (ಇಂದು) ಬೆಳಿಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ ನಾಗರಿಕರು ಸಹಕಾರ ನೀಡುವಂತೆ ಶ್ರೀಮಂಗಲ ವಲಯ ಅರಣ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.