ಸೋಮವಾರಪೇಟೆ, ಆ. 22: ಪರಿಹಾರ ಕೇಂದ್ರದಲ್ಲಿದ್ದ ಸಂಬಂಧಿಕರನ್ನು ಮಾತನಾಡಿಸಲು ಹೋದ ವೃದ್ಧೆಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಬಿಳಿಗೇರಿ ಗ್ರಾಮದ ಪೊರೇರ ಸುಬ್ಬಯ್ಯನವರ ಪತ್ನಿ ಬೋಜಮ್ಮ (80) ಎಂಬವರೇ ಮೃತಪಟ್ಟ ದುರ್ದೈವಿ. ಇವರು ತಮ್ಮ ಸಂಬಂಧಿಕರನ್ನು ನೋಡಲು ಕೊಡವ ಸಮಾಜದಲ್ಲಿ ಸ್ಥಾಪಿಸಿರುವ ಪರಿಹಾರ ಕೇಂದ್ರಕ್ಕೆ ಮಂಗಳವಾರದಂದು ತೆರಳಿ ಅಲ್ಲಿಯೇ ತಂಗಿದ್ದರು.

ರಾತ್ರಿ 11 ಗಂಟೆ ವೇಳೆಗೆ ಹೃದಯಾಘಾತಕ್ಕೊಳಗಾಗಿದ್ದು, ಕೂಡಲೇ ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾ ಯಿತು. ಬೆಳಿಗ್ಗೆ 3.30ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರು ಶವವನ್ನು ಸ್ವಗ್ರಾಮಕ್ಕೆ ಕೊಂಡೊಯ್ದರು. ಮೃತೆ ಬೋಜಮ್ಮ ವಯೋಸಹಜ ಕಾಯಿಲೆಯಿಂದ ನರಳುತ್ತಿದ್ದರು ಎನ್ನಲಾಗಿದೆ.