ಸೋಮವಾರಪೇಟೆ,ಆ.24: ಭಯಾನಕವಾಗಿ ಭೂಕುಸಿತಕ್ಕೆ ಒಳಗಾಗಿರುವ ಹಟ್ಟಿಹೊಳೆ ಪ್ರದೇಶಕ್ಕೆ ಕೇಂದ್ರ ರಕ್ಷಣಾ ಖಾತೆ ಸಚಿವರಾದ ನಿರ್ಮಲ ಸೀತಾರಾಮನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹಟ್ಟಿಹೊಳೆಯಲ್ಲಿ ನೂರಾರು ಎಕರೆ ಪ್ರದೇಶದಲ್ಲಿದ್ದ ಕಾಫಿ ತೋಟ, ರಸ್ತೆ, ಭೂಮಿ, ಮನೆ ಕುಸಿತಗಳು ಸಂಭವಿಸಿದ್ದು, ಭಾರೀ ನಷ್ಟ ಉಂಟಾಗಿರುವ ಸ್ಥಳಗಳನ್ನು ಸಚಿವರು ವೀಕ್ಷಿಸಿದರು. ಈ ಸಂದರ್ಭ ಸಂಸದ ಪ್ರತಾಪ್ ಸಿಂಹ, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ವೀರಾಜಪೇಟೆಯ ಶಾಸಕ ಕೆ.ಜಿ. ಬೋಪಯ್ಯ, ಜಿ.ಪಂ. ಅಧ್ಯಕ್ಷ ಹರೀಶ್, ಜಿಲ್ಲಾಧಿಕಾರಿ ಶ್ರೀವಿದ್ಯಾ, ಪೊಲೀಸ್ ವರಿಷ್ಠಾಧಿಕಾರಿ ಸುಮನ್, ಕಾಫಿ ಮಂಡಳಿ ಉಪಾಧ್ಯಕ್ಷೆ ರೀನಾ ಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು.