ನಾಪೆÇೀಕ್ಲು, ಆ. 28: ನಾಪೆÇೀಕ್ಲು ಸಮೀಪದ ಕುಂಜಿಲ- ಕಕ್ಕಬ್ಬೆ ಗ್ರಾಮ ಪಂಚಾಯಿತಿಗೆ ಒಳಪಟ್ಟ ಯವಕಪಾಡಿ ಗ್ರಾಮದ ಕಬ್ಬಿನಕಾಡು ಬಳಿ ಗುಡ್ಡ ಕುಸಿದಿರುವ ಬಗ್ಗೆ ಜನ ಆತಂಕಗೊಂಡಿದ್ದಾರೆ.

ಗ್ರಾಮದ ಕೇಟೋಳಿರ ಸನ್ನಿ ಸೋಮಣ್ಣ ಅವರ ತೋಟದಲ್ಲಿ ಗುಡ್ಡ ಕುಸಿದಿದ್ದು, ಮತ್ತೊಂದೆಡೆ ಬಿರುಕು ಬಿಟ್ಟಿರುವದು ಕಂಡು ಬಂದಿದೆ. ದೃಶ್ಯ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಜನ ಹೆಚ್ಚಿನ ಆತಂಕಕ್ಕೆ ಒಳಗಾಗಿದ್ದರು. ಸ್ಥಳಕ್ಕೆ ನಾಪೆÇೀಕ್ಲು ಪೆÇಲೀಸ್ ಠಾಣಾಧಿಕಾರಿ ನಂಜುಂಡ ಸ್ವಾಮಿ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸಿದರು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ವಿಜ್ಞಾನಿಗಳು ಸ್ಥಳ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕಾಗಿದೆ.

ನೆನ್ನೆ ಸಂಜೆ ತೋಟಕ್ಕೆ ಹೋದ ಸಂದರ್ಭದಲ್ಲಿ ಗುಡ್ಡ ಕುಸಿದಿರುವದು ಮತ್ತು ಬಿರುಕು ಬಿಟ್ಟಿರುವದು ಗೋಚರಿಸಿದೆ. ಇದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಸಂಬಂಧಿಸಿದವರು ಸೂಕ್ತ ತನಿಖೆ ನಡೆಸಿ ಜನರ ಆತಂಕ ದೂರಮಾಡಬೇಕೆಂದು ಜಾಗದ ಮಾಲೀಕ ಕೇಟೋಳಿರ ಸನ್ನಿ ಸೋಮಣ್ಣ ತಿಳಿಸಿದ್ದಾರೆ.