ಶ್ರೀಮಂಗಲ, ಸೆ. 6: ವೀರಾಜಪೇಟೆ ಮಗ್ಗುಲ ಗ್ರಾಮದಲ್ಲಿರುವ

ಶ್ರೀ ಶನೀಶ್ವರ ಮತ್ತು ನವಗ್ರಹ ದೇವಸ್ಥಾನದಲ್ಲಿ ತಾ.8 ರಂದು (ನಾಳೆ) ಮಧ್ಯಾಹ್ನ 1 ಗಂಟೆಗೆ ಟಿ. ಶೆಟ್ಟಿಗೇರಿಯ ಉಳುವಂಗಡ ಕಾವೇರಿ ಉದಯ ಅವರು ಈ ದೇವಸ್ಥಾನದ ದೇವಪುರಾಣ ಕಿರುಪರಿಚಯ ಮತ್ತು ಪುಸ್ತಕವನ್ನು ಬಿಡುಗಡೆ ಮಾಡುವ ಕಾರ್ಯಕ್ರಮ ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಚೋಕಂಡ ರಮೇಶ್ ತಿಳಿಸಿದ್ಧಾರೆ.