ಮಡಿಕೇರಿ, ಸೆ. 7: ಮೈಸೂರಿನ ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಅಕ್ಟೋಬರ್ ತಿಂಗಳಿನಲ್ಲಿ ನಡೆಸಲಿರುವ ಕನ್ನಡ ಭಾಷಾ ಪಿಯು ಉಪನ್ಯಾಸಕರ ನೇಮಕಾತಿ ಪರೀಕ್ಷೆಗೆ ತರಬೇತಿ ನೀಡಲಾಗುತ್ತದೆ. ಆಸಕ್ತರು ತಾ. 10 ರೊಳಗಾಗಿ ಪ್ರತಿದಿನ ಸಂಜೆ 6 ಗಂಟೆಯಿಂದ 8 ಗಂಟೆಯೊಳಗಾಗಿ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪಿಯು ಕಾಲೇಜು ಆವರಣದಲ್ಲಿ ತರಬೇತಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕಾರ್ಯದರ್ಶಿ ಹೆಚ್. ಬಾಲಕೃಷ್ಣ ಅವರು ಕೋರಿದ್ದಾರೆ. ವಿವರಗಳಿಗೆ ಮೊಬೈಲ್ ಸಂಖ್ಯೆ: 9844002517, 9448117455 ನ್ನು ಸಂಪರ್ಕಿಬಹುದು.