ಮಡಿಕೇರಿ, ಸೆ. 11: ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಇನ್ನರ್‍ವೀಲ್, ರೋಟರಿ ಮಿಸ್ಟಿ ಹಿಲ್ಸ್ ಮತ್ತು ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ನಡೆಸಲು ಉದ್ದೇಶಿಸಿದ್ದ ರಾಷ್ಟ್ರೀಯ ವರ್ಣಚಿತ್ರ ಸ್ಪರ್ಧೆಯನ್ನು ಪ್ರಕೃತಿ ವಿಕೋಪ ಹಿನ್ನೆಲೆ ಮುಂದೂಡಲ್ಪಟ್ಟಿದ್ದು, ಇದೀಗ ತಾ. 16 ರಂದು ಪೂರ್ವಾಹ್ನ 10.30 ಗಂಟೆಗೆ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಚೇತನ ಚಿಲುಮೆ ಸಭಾಂಗಣದಲ್ಲಿ ನಡೆಸಲಾಗುವದು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂ. 08272-229004 ಮತ್ತು 9480745776 ಗೆ ಸಂಪರ್ಕಿಸುವಂತೆ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಮೋಹನ್ ಮೊಣ್ಣಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಸೀತಾಲಕ್ಷ್ಮಿ ರಾಮಚಂದ್ರ ಇವರುಗಳು ತಿಳಿಸಿದ್ದಾರೆ.