ಸೋಮವಾರಪೇಟೆ,ಸೆ.20: ದಲಿತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಇನ್ನಷ್ಟು ಕಠಿಣಗೊಳಿಸಬೇಕು. ಸುಪ್ರೀಂ ಕೋರ್ಟ್‍ನಂತಹ ಉನ್ನತ ನ್ಯಾಯಪೀಠದಲ್ಲಿ ದಲಿತರಿಗೆ ಮೀಸಲಾತಿ ಕಲ್ಪಿಸಬೇಕು. ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಮೇಲೆ ಹಾಕಿರುವ ಸುಳ್ಳು ಕೇಸ್‍ಗಳನ್ನು ಹಿಂಪಡೆಯಬೇಕು. ದಲಿತರಿಗೆ ಬಡ್ತಿ ಮೀಸಲಾತಿ ಜಾರಿಗೊಳಿಸಬೇಕು. ಸಂವಿಧಾನ ಸುಟ್ಟ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ತಾ. 24ರಂದು ದಲಿತ ಸಂಘರ್ಷ ಸಮಿತಿ(ಸಂಯೋಜಕ) ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಅಧ್ಯಕ್ಷ ಪಾಲಾಕ್ಷ ತಿಳಿಸಿದ್ದಾರೆ.

ತಾ. 24ರಂದು ಪೂರ್ವಾಹ್ನ 10.30ಕ್ಕೆ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ, ತಾಲೂಕು ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಗುವದು ಎಂದು ಅವರು ಮಾಹಿತಿ ನೀಡಿದ್ದಾರೆ.