ವೀರಾಜಪೇಟೆ, ಸೆ. 22: ವೀರಾಜಪೇಟೆಯ ಮಲೆತಿರಿಕೆ ಬೆಟ್ಟದ ನಿವಾಸಿ, ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ವಾಸು (40) ಎಂಬಾತÀ ಜೀವನದಲ್ಲಿ ಜಿಗುಪ್ಸೆಗೊಂಡು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾ. 21 ರಂದು ಸುಂಕದಕಟ್ಟೆ ಬಳಿ ಆಟೋ ನಿಲ್ಲಿಸಿ ವಿಷಸೇವಿಸಿ ದೂರವಾಣಿ ಮೂಲಕ ಮನೆಯವರಿಗೆ ತಿಳಿಸಿದ್ದು, ಮನೆಯವರು ಬಂದು ನೋಡಿ ವೀರಾಜಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು ತೆರಳುವ ದಾರಿಯಲ್ಲಿಯೇ ಮೃತಪಟ್ಟಿದ್ದಾನೆ.

ಮೃತ ವಾಸು ಪುತ್ರ ಕರುಣ್ ನಗರ ಠಾಣೆಗೆ ನೀಡಿದ ದೂರನ್ನು ದಾಖಲಿಸಿಕೊಂಡ ಪೊಲೀಸರು ಶವ ಪರಿಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.