ಮಡಿಕೇರಿ, ಸೆ.22 :ಗ್ರೀನ್ ಸಿಟಿ ಫೋರಂ ವತಿಯಿಂದ ಮೂರನೇ ದಿನದ ಸ್ವಚ್ಛತಾ ಕಾರ್ಯ ತಾ.23 ರಂದು (ಇಂದು) ಬೆಳಗ್ಗೆ 8 ಗಂಟೆಯಿಂದ 11 ಗಂಟೆಯವರೆಗೆ ಕೋಟೆ ಆವರಣದಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಫೀ.ಮಾ.ಕಾರ್ಯಪ್ಪ ಕಾಲೇಜಿನ ಎನ್‍ಸಿಸಿ ಅಧಿಕಾರಿ ಮೇ.ರಾಘವ, ಎಲ್ಲಾ ನ್ಯಾಯಾಧೀಶರುಗಳು, ನ್ಯಾಯಾಂಗ ಇಲಾಖೆಯ ನೌಕರರು, ವಕೀಲರ ಸಂಘ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳ ಪ್ರಮುಖರು ಹಾಗೂ ಸದಸ್ಯರು ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗ್ರೀನ್ ಸಿಟಿ ಫೋರಂನ ಕಾರ್ಯದರ್ಶಿ ವಕೀಲ ಕೃಷ್ಣಮೂರ್ತಿ ತಿಳಿಸಿದ್ದಾರೆ.