ಮಡಿಕೇರಿ, ಸೆ. 21: ಕೆ.ವಿ.ಜಿ. ಕಾನೂನು ಮಹಾ ವಿದ್ಯಾಲಯದ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಂಘದ ಉದ್ಘಾಟನೆ ಸಮಾರಂಭ ಕೆ.ವಿ.ಜಿ. ಕಾನೂನು ಕಾಲೇಜು ಸಭಾಂಗಣದಲ್ಲಿ ತಾ. 20 ರಂದು ನಡೆಯಿತು. ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾಗಿ ಜಿಲ್ಲೆಯ ಇಬ್ಬರು ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ವಿದ್ಯಾಲಯ ಹುಬ್ಬಳ್ಳಿ ಇದರ ಉಪಕುಲಪತಿ ಡಾ. ಈಶ್ವರಭಟ್ ಸಮಾರಂಭವನ್ನು ಉದ್ಘಾಟಿಸಿದರು. ಇದರಲ್ಲಿ ಕೊಡಗಿನ ಕಗ್ಗೋಡ್ಲು ಗ್ರಾಮದ ಮಂದ್ರೀರ ಶ್ಯಾಂ ಪ್ರಸಾದ್ (ಐಕ್ಕಿ ಕುಟ್ಟಪ್ಪ) ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹಾಗೂ ವೀರಾಜಪೇಟೆಯ ನಿಕಿಲ್ ಎಸ್. ಕಾರ್ಯದರ್ಶಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.