ಮಡಿಕೇರಿ, ಸೆ. 23: ಕೊಡಗು ಜಿಲ್ಲೆಯಲ್ಲಿ 2018 ನೇ ಸಾಲಿನಲ್ಲಿ ಬಿದ್ದ ಭಾರೀ ಮಳೆಯಿಂದ ಜಿಲ್ಲೆಯ ಕೃಷಿ, ತೋಟಗಾರಿಕೆ, ಕಾಫಿ, ಏಲಕ್ಕಿ, ಕರಿಮೆಣಸು ಬೆಳೆಗಳು ನಾಶವಾಗಿದ್ದು, ಬೆಳೆ ನಷ್ಟದ ಸಮೀಕ್ಷೆ ನಡೆಸಲು ಈಗಾಗಲೇ ಜಿಲ್ಲಾಡಳಿತದ ವತಿಯಿಂದ ಕಾಫಿ ಮಂಡಳಿ, ತೋಟಗಾರಿಕೆ, ಕೃಷಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಒಟ್ಟು 109 ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳು ಜಿಲ್ಲೆಯಾದ್ಯಂತ ಬೆಳೆ ನಷ್ಟ ಹಾಗೂ ಭೂಕುಸಿತದಿಂದ ಉಂಟಾದ ತೋಟ ನಷ್ಟದ ಬಗ್ಗೆ ಸಮೀಕ್ಷೆ ನಡೆಸುತ್ತಿವೆ.

ಈ ದಿಸೆಯಲ್ಲಿ ಜಿಲ್ಲೆಯ ಎಲ್ಲಾ ರೈತರು - ಬೆಳೆಗಾರರು ಸಹಕರಿಸಲು ಹಾಗೂ ಮಾಹಿತಿಗಾಗಿ ತಮ್ಮ ಗ್ರಾಮ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷಕರು ಅಥವಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ. ತಾಲೂಕುವಾರು ಸಹಾಯವಾಣಿಗಳನ್ನೂ ಸಹ ಸ್ಥಾಪಿಸಲಾಗಿದ್ದು, ಹೆಚ್ಚಿನ ಮಾಹಿತಿಗೆ ಮಡಿಕೇರಿ ತಾಲೂಕು: 08272-228396, ವೀರಾಜಪೇಟೆ ತಾಲೂಕು: 08274-257328, ಸೋಮವಾರಪೇಟೆ ತಾಲೂಕು: 08276-282045 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.