ಗೋಣಿಕೊಪ್ಪ ವರದಿ, ಸೆ. 23: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಕೂರ್ಗ್ ಪಬ್ಲಿಕ್ ಪದವಿಪೂರ್ವ ಕಾಲೇಜು ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಚೆಸ್ ಪಂದ್ಯಾವಳಿ ಯಲ್ಲಿ ಕೂರ್ಗ್ ಇನ್ಸ್ಟಿಟ್ಯೂಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದ ಧ್ಯಾನ್ ಮೇದಪ್ಪ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಒಟ್ಟು 4 ಪಂದ್ಯಗಳಲ್ಲಿ 3 ಪಂದ್ಯದಲ್ಲಿ ಜಯಗಳಿಸುವ ಮೂಲಕ ರಾಯಚೂರಿನಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಗೆ 4ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಧ್ಯಾನ್ ಮೇದಪ್ಪ ಪೊನ್ನಂಪೇಟೆ ಭಗವತಿನಗರದ ಬಲ್ಲಡಿಚಂಡ ಸೋಮಯ್ಯ ಮತ್ತು ಕಸ್ತೂರಿ ದಂಪತಿ ಪುತ್ರ.