*ಸಿದ್ದಾಪುರ, ಸೆ. 23: ಕಳೆದ ಎರೆಡು ವರ್ಷಗಳಿಂದ ವಾಲ್ನೂರು- ತ್ಯಾಗತ್ತೂರು ಗ್ರಾಮ ಪಂಚಾಯಿತಿಯಲ್ಲಿ ಪ್ರಬಾರ ಗ್ರಾಮಾಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಂಜುಂಡ ಸ್ವಾಮಿ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿಗೆ ವರ್ಗಾವಣೆಗೊಂಡಿದ್ದಾರೆ.

ವರ್ಗಾವಣೆಗೊಂಡ ಗ್ರಾಮಾಭಿವೃದ್ಧಿ ಅಧಿಕಾರಿ ನಂಜುಂಡ ಸ್ವಾಮಿಗೆ ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನ, ಉಪಾಧ್ಯಕ್ಷೆ ಸತೀಶ್, ಸದಸ್ಯರುಗಳಾದ ಅಂಚೆಮನೆ ಸುಧಿ, ಭುವನೇಂದ್ರ. ದಿನೇಶ್, ಸಲೀಂ, ಕಮಲಮ್ಮ, ಯಶೋಧ, ನಳಿನಿ, ಕವಿತ, ಜಮೀಲ ಸಿಬ್ಬಂದಿಗಳಾದ ಮಣಿ ಮತ್ತು ಮಿಲನ, ಜಯಮಾಲ ಉಪಸ್ಥಿತರಿದ್ದರು.