ಸೋಮವಾರಪೇಟೆ, ಸೆ. 23: ಇಲ್ಲಿನ 561ನೇ ವಿವಿಧೋದ್ದೇಶ ಸಹಕಾರ ಸಂಘವು ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ ಭಾಜನವಾಗಿದೆ. ಮಡಿಕೇರಿಯ ಕೊಡವ ಸಮಾಜದಲ್ಲಿ ನಡೆದ ಡಿಸಿಸಿ ಬ್ಯಾಂಕ್‍ನ ಮಹಾಸಭೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ನ ಅಧ್ಯಕ್ಷ ಬಿ.ಡಿ. ಮಂಜುನಾಥ್ ಅವರು, ‘ಉತ್ತಮ ಸಹಕಾರ ಸಂಘ ಪ್ರಶಸ್ತಿ’ಯೊಂದಿಗೆ ರೂ. 20 ಸಾವಿರ ನಗದು ಬಹುಮಾನವನ್ನು ಸಂಘದ ಅಧ್ಯಕ್ಷ ಬಿ.ಪಿ. ಶಿವಕುಮಾರ್‍ಗೆ ವಿತರಿಸಿದರು.